
ಮಾನವರಹಿತ ತೂಕ ಅಳವಡಿಸಿ ರೈತರಿಗೆ ನ್ಯಾಯ ನೀಡಿ – ಶಾಸಕ ಜೆ.ಟಿ. ಪಾಟೀಲ
ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಲ್ಲಿ ಮಾನವರಹಿತ ತೂಕ ಅಳವಡಿಸಿ ರೈತರಿಗೆ ನ್ಯಾಯ ಒದಗಿಸಿದರೆ, ಖುದ್ದಾಗಿ ಬಂದು ನಿಮಗೆ ಸನ್ಮಾನ ಮಾಡುತ್ತೇನೆ” ಎಂದು ಬೀಳಗಿ ಶಾಸಕ ಜೆ.ಟಿ. ಪಾಟೀಲ ಹೇಳಿದರು. ನಗರದ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಮಾಜಿ ಸಚಿವ ಮುರುಗೇಶ್ ನಿರಾಣಿಯವರು ನೀಡಿದ ಹೇಳಿಕೆಗಳಿಗೆ ತಿರುಗೇಟು ನೀಡಿದರು. “ನನ್ನ ಮೇಲೆ ಭ್ರಷ್ಟಾಚಾರ ಆರೋಪಗಳನ್ನು ಸಾಬೀತುಪಡಿಸಲಿ. ನಾನು ಕುಟುಂಬ ರಾಜಕಾರಣ ಮಾಡಿಲ್ಲ. ಯಾರ ಹತ್ತಿರವೂ ಕಪ್ ಚಹಾ ಸಹ ಕುಡಿದಿಲ್ಲ. ವಿನಾಕಾರಣ ನನ್ನ ತೇಜೋವಧೆ







